ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.