ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.