ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ನಾಡಿನಲ್ಲಿಯೇ ಇಷ್ಟು ಆಪತ್ತುಗಳು ಇರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕಾಗಿ ಕೆಯೀಲಾಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಗಂಡಾಂತರಗಳು ಕಾದಿರಬಹುದಲ್ಲವೆ?” ಎಂದರು.