ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡನು ಎಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.