ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.