ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.