ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.