ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.
Go to Home Page