ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.