ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.