ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.