ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.