ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.