ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.