ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.